ಕನ್ನಡ ನಾಡಿನ ವೀರ ರಮಣಿಯ
ಗಂಡು ಭೂಮಿಯ ವೀರ ನಾರಿಯ
ಚರಿತೆಯ ನಾನು ಹಾಡುವೆ
ಕನ್ನಡ ನಾಡಿನ ವೀರ ರಮಣಿಯ
ಗಂಡು ಭೂಮಿಯ ವೀರ ನಾರಿಯ
ಚರಿತೆಯ ನಾನು ಹಾಡುವೆ
ಚಿತ್ರದುರ್ಗದ ಕಲ್ಲಿನ ಕೋಟೆ
ಸಿಡಿಲಿಗು ಬೆಚ್ಚದ ಉಕ್ಕಿನ ಕೋಟೆ
ಚಿತ್ರದುರ್ಗದ ಕಲ್ಲಿನ ಕೋಟೆ
ಸಿಡಿಲಿಗು ಬೆಚ್ಚದ ಉಕ್ಕಿನ ಕೋಟೆ
ಮದಿಸಿದ ಕರಿಯ ಮದವಡಗಿಸಿದ
ಮದಕರಿ ನಾಯಕರಾಳಿದ ಕೋಟೆ
ಪುಣ್ಯ ಭೂಮಿಯು ಈ ಬೀಡು
ಸಿದ್ದರು ಹರಸಿದ ಸಿರಿನಾಡು
|| ಕನ್ನಡ ನಾಡಿನ ವೀರ ರಮಣಿಯ
ಗಂಡು ಭೂಮಿಯ ವೀರ ನಾರಿಯ
ಚರಿತೆಯ ನಾನು ಹಾಡುವೆ…||
ವೀರಮದಕರಿ ಆಳುತಲಿರಲು
ಹೈದಾರಾಲಿಯು ಯುದ್ದಕೆ ಬರಲು
ಕೋಟೆ ಜನಗಳ ರಕ್ಷಿಸುತಿರಲು
ಸತತ ದಾಳಿಯು ವ್ಯರ್ಥವಾಗಲು
ವೈರಿ ಚಿಂತೆಯಲಿ ಬಸವಳಿದ
ದಾರಿಗಾಣದೆ ಮಂಕಾದ
|| ಕನ್ನಡ ನಾಡಿನ ವೀರ ರಮಣಿಯ
ಗಂಡು ಭೂಮಿಯ ವೀರ ನಾರಿಯ
ಚರಿತೆಯ ನಾನು ಹಾಡುವೆ…||
ಗೂಡಚಾರರು ಅಲೆದು ಬಂದರು
ಹೈದಾರಾಲಿಗೆ ವಿಷಯ ತಂದರು
ಚಿತ್ರದುರ್ಗದ ಕೋಟೆಯಲಿ ವಾಯುವ್ಯ
ದಿಕ್ಕಿನೆಡೆ ನೋಡು ಎಂದರು
ಕಳ್ಳಗಂಡಿಯ ತೋರಿದರು
ಲಗ್ಗೆ ಹತ್ತಲು ಹೇಳಿದರು
|| ಕನ್ನಡ ನಾಡಿನ ವೀರ ರಮಣಿಯ
ಗಂಡು ಭೂಮಿಯ ವೀರ ನಾರಿಯ
ಚರಿತೆಯ ನಾನು ಹಾಡುವೆ…||
ಓ... ಸರದಾರ....
ಕೈಗೆ ಸಿಕ್ಕಿದ ಒನಕೆ ಹಿಡಿದಳು,
ವೀರ ಕಚ್ಚೆಯ ಹಾಕಿ ನಿಂತಳು
ದುರ್ಗಿಯನ್ನು ಮನದಲ್ಲಿ ನೆನೆದಳು
ಕಾಳಿಯಂತೆ ಬಲಿಗಾಗಿ ಕಾದಳು
ಯಾರವಳು ಯಾರವಳು
ವೀರ ವನಿತೆ ಆ ಓಬವ್ವ,
ದುರ್ಗವು ಮರೆಯದ ಓಬವ್ವ
|| ಕನ್ನಡ ನಾಡಿನ ವೀರ ರಮಣಿಯ
ಗಂಡು ಭೂಮಿಯ ವೀರ ನಾರಿಯ
ಚರಿತೆಯ ನಾನು ಹಾಡುವೆ…||
ತೆವಳುತ ಒಳಗೆ ಬರುತಿರೆ ವೈರಿ,
ಒನಕೆಯ ಬೀಸಿ ಕೊಂದಳು ನಾರಿ
ಸತ್ತವನನ್ನು ಎಳೆದು ಹಾಕುತ
ಮತ್ತೆ ನಿಂತಳು ಹಲ್ಲು ಮಸೆಯುತ್ತಾ
ವೈರಿ ರುಂಡ ಚೆಂಡಾಡಿದಳು
ರಕುತದ ಕೊಡಿ ಹಾರಿಸಿದಳು
|| ಕನ್ನಡ ನಾಡಿನ ವೀರ ರಮಣಿಯ
ಗಂಡು ಭೂಮಿಯ ವೀರ ನಾರಿಯ
ಚರಿತೆಯ ನಾನು ಹಾಡುವೆ…||
ಸತಿಯ ಹುಡುಕುತ ಕಾವಲಿನವನು
ಗುಪ್ತದ್ವಾರದ ಬಳಿಗೆ ಬಂದನು
ಮಾತು ಹೊರಡದೆ ಬೆಚ್ಚಿ ನಿಂತನು
ಹೆಣದ ರಾಶಿಯ ಬಳಿಯೆ ಕಂಡನು
ರಣಚೆಂಡಿ ಅವತಾರವನು
ಕೋಟೆ ಸಲುಹಿದ ತಾಯಿಯನು
ಹೈದರಾಲಿಯ ಸೈನ್ಯ ನಮ್ಮ ಕೋಟೆಯನ್ನು
ಮುತ್ತಿದೆ ಹೋಗಿ ರಣ ಕಹಳೆಯನು ಊದಿ
ರಣ ಕಹಳೆಯನು ಊದುತಲಿರಲು
ಸಾಗರದಂತೆ ಸೈನ್ಯ ನುಗ್ಗಲು
ವೈರಿ ಪಡೆಯು ನಿಶ್ಶೇಷವಾಗಲು
ಕಾಳಗದಲ್ಲಿ ಜಯವನು ತರಲು
ಅಮರಳಾದಳು ಓಬವ್ವ…
ಚಿತ್ರದುರ್ಗದ ಓಬವ್ವ…
|| ಕನ್ನಡ ನಾಡಿನ ವೀರರಮಣಿಯ
ಗಂಡು ಭೂಮಿಯ ವೀರ ನಾರಿಯ
ಚರಿತೆಯ ನಾನು ಹಾಡುವೆ…||
ಕನ್ನಡ ನಾಡಿನ ವೀರ ರಮಣಿಯ
ಗಂಡು ಭೂಮಿಯ ವೀರ ನಾರಿಯ
ಚರಿತೆಯ ನಾನು ಹಾಡುವೆ
ಕನ್ನಡ ನಾಡಿನ ವೀರ ರಮಣಿಯ
ಗಂಡು ಭೂಮಿಯ ವೀರ ನಾರಿಯ
ಚರಿತೆಯ ನಾನು ಹಾಡುವೆ
ಚಿತ್ರದುರ್ಗದ ಕಲ್ಲಿನ ಕೋಟೆ
ಸಿಡಿಲಿಗು ಬೆಚ್ಚದ ಉಕ್ಕಿನ ಕೋಟೆ
ಚಿತ್ರದುರ್ಗದ ಕಲ್ಲಿನ ಕೋಟೆ
ಸಿಡಿಲಿಗು ಬೆಚ್ಚದ ಉಕ್ಕಿನ ಕೋಟೆ
ಮದಿಸಿದ ಕರಿಯ ಮದವಡಗಿಸಿದ
ಮದಕರಿ ನಾಯಕರಾಳಿದ ಕೋಟೆ
ಪುಣ್ಯ ಭೂಮಿಯು ಈ ಬೀಡು
ಸಿದ್ದರು ಹರಸಿದ ಸಿರಿನಾಡು
|| ಕನ್ನಡ ನಾಡಿನ ವೀರ ರಮಣಿಯ
ಗಂಡು ಭೂಮಿಯ ವೀರ ನಾರಿಯ
ಚರಿತೆಯ ನಾನು ಹಾಡುವೆ…||
ವೀರಮದಕರಿ ಆಳುತಲಿರಲು
ಹೈದಾರಾಲಿಯು ಯುದ್ದಕೆ ಬರಲು
ಕೋಟೆ ಜನಗಳ ರಕ್ಷಿಸುತಿರಲು
ಸತತ ದಾಳಿಯು ವ್ಯರ್ಥವಾಗಲು
ವೈರಿ ಚಿಂತೆಯಲಿ ಬಸವಳಿದ
ದಾರಿಗಾಣದೆ ಮಂಕಾದ
|| ಕನ್ನಡ ನಾಡಿನ ವೀರ ರಮಣಿಯ
ಗಂಡು ಭೂಮಿಯ ವೀರ ನಾರಿಯ
ಚರಿತೆಯ ನಾನು ಹಾಡುವೆ…||
ಗೂಡಚಾರರು ಅಲೆದು ಬಂದರು
ಹೈದಾರಾಲಿಗೆ ವಿಷಯ ತಂದರು
ಚಿತ್ರದುರ್ಗದ ಕೋಟೆಯಲಿ ವಾಯುವ್ಯ
ದಿಕ್ಕಿನೆಡೆ ನೋಡು ಎಂದರು
ಕಳ್ಳಗಂಡಿಯ ತೋರಿದರು
ಲಗ್ಗೆ ಹತ್ತಲು ಹೇಳಿದರು
|| ಕನ್ನಡ ನಾಡಿನ ವೀರ ರಮಣಿಯ
ಗಂಡು ಭೂಮಿಯ ವೀರ ನಾರಿಯ
ಚರಿತೆಯ ನಾನು ಹಾಡುವೆ…||
ಓ... ಸರದಾರ....
ಕೈಗೆ ಸಿಕ್ಕಿದ ಒನಕೆ ಹಿಡಿದಳು,
ವೀರ ಕಚ್ಚೆಯ ಹಾಕಿ ನಿಂತಳು
ದುರ್ಗಿಯನ್ನು ಮನದಲ್ಲಿ ನೆನೆದಳು
ಕಾಳಿಯಂತೆ ಬಲಿಗಾಗಿ ಕಾದಳು
ಯಾರವಳು ಯಾರವಳು
ವೀರ ವನಿತೆ ಆ ಓಬವ್ವ,
ದುರ್ಗವು ಮರೆಯದ ಓಬವ್ವ
|| ಕನ್ನಡ ನಾಡಿನ ವೀರ ರಮಣಿಯ
ಗಂಡು ಭೂಮಿಯ ವೀರ ನಾರಿಯ
ಚರಿತೆಯ ನಾನು ಹಾಡುವೆ…||
ತೆವಳುತ ಒಳಗೆ ಬರುತಿರೆ ವೈರಿ,
ಒನಕೆಯ ಬೀಸಿ ಕೊಂದಳು ನಾರಿ
ಸತ್ತವನನ್ನು ಎಳೆದು ಹಾಕುತ
ಮತ್ತೆ ನಿಂತಳು ಹಲ್ಲು ಮಸೆಯುತ್ತಾ
ವೈರಿ ರುಂಡ ಚೆಂಡಾಡಿದಳು
ರಕುತದ ಕೊಡಿ ಹಾರಿಸಿದಳು
|| ಕನ್ನಡ ನಾಡಿನ ವೀರ ರಮಣಿಯ
ಗಂಡು ಭೂಮಿಯ ವೀರ ನಾರಿಯ
ಚರಿತೆಯ ನಾನು ಹಾಡುವೆ…||
ಸತಿಯ ಹುಡುಕುತ ಕಾವಲಿನವನು
ಗುಪ್ತದ್ವಾರದ ಬಳಿಗೆ ಬಂದನು
ಮಾತು ಹೊರಡದೆ ಬೆಚ್ಚಿ ನಿಂತನು
ಹೆಣದ ರಾಶಿಯ ಬಳಿಯೆ ಕಂಡನು
ರಣಚೆಂಡಿ ಅವತಾರವನು
ಕೋಟೆ ಸಲುಹಿದ ತಾಯಿಯನು
ಹೈದರಾಲಿಯ ಸೈನ್ಯ ನಮ್ಮ ಕೋಟೆಯನ್ನು
ಮುತ್ತಿದೆ ಹೋಗಿ ರಣ ಕಹಳೆಯನು ಊದಿ
ರಣ ಕಹಳೆಯನು ಊದುತಲಿರಲು
ಸಾಗರದಂತೆ ಸೈನ್ಯ ನುಗ್ಗಲು
ವೈರಿ ಪಡೆಯು ನಿಶ್ಶೇಷವಾಗಲು
ಕಾಳಗದಲ್ಲಿ ಜಯವನು ತರಲು
ಅಮರಳಾದಳು ಓಬವ್ವ…
ಚಿತ್ರದುರ್ಗದ ಓಬವ್ವ…
|| ಕನ್ನಡ ನಾಡಿನ ವೀರರಮಣಿಯ
ಗಂಡು ಭೂಮಿಯ ವೀರ ನಾರಿಯ
ಚರಿತೆಯ ನಾನು ಹಾಡುವೆ…||